ಆನೇಕಲ್ ನಾಗರೀಕ ವೇದಿಕೆ ಅಂತರ್ಜಾಲ ತಾಣಕ್ಕೆ ಸರ್ವರಿಗೂ ಸುಸ್ವಾಗತ

ANV


I made this widget at MyFlashFetish.com.

Sunday, January 30, 2011

ವಿಮಾನ ಕಂಡುಹಿಡಿದದ್ದು ಆನೇಕಲ್ ಸುಬ್ಬರಾಯ ಶಾಸ್ತ್ರಿ

 ಆನೇಕಲ್ ಸುಬ್ಬರಾಯ ಶಾಸ್ತ್ರಿ
ವಿಮಾನ ಕಂಡುಹಿಡಿದವರು ಯಾರು? ಎಂದು ಕೇಳಿದರೆ ರೈಟ್ ಸಹೋದರರು ಅಂತ ಸಣ್ಣ ಮಕ್ಕಳು ಸಹ ಉತ್ತರಿಸುತ್ತಾರೆ. ಇದು ಇಡೀ ಜಗತ್ತಿಗೆ ಗೊತ್ತಿರುವ ಸಂಗತಿ. ಆದರೆ ಸಣ್ಣ ಮಕ್ಕಳಿರಲಿ ದೊಡ್ಡವರೂ ಅರಗಿಸಿಕೊಳ್ಳಲಾಗದ ಸತ್ಯ ಏನೆಂದರೆ ವಿಮಾನ ಕಂಡುಹಿಡಿದದ್ದು ಕರ್ನಾಟಕದವರು ಎಂಬುದು.
       ಹೌದು ಇತಿಹಾಸದ ಪುಟಗಳಲ್ಲಿ ದಾಖಲಾಗದ ಮಹತ್ವದ ಸಂಗತಿಯೊಂದು ಅನಾವರಣಗೊಳ್ಳುತ್ತಿದೆ. ರೈಟ್ ಸಹೋದರರಿಗೂ ಮುನ್ನ ಬೆಂಗಳೂರು ಸಮೀಪದ ಆನೇಕಲ್ ನಲ್ಲಿದ್ದ ಸುಬ್ಬರಾಯ ಶಾಸ್ತ್ರಿಗಳು ವಿಮಾನ ತಯಾರಿಸಿ ಉಡಾಯಿಸಿದ್ದರು ಎಂಬುದೇ ಆ ಸತ್ಯ ಕಥೆ. 1940ರವರೆಗೂ ಸುಬ್ಬರಾಯ ಶಾಸ್ತ್ರಿಗಳು ಬದುಕಿದ್ದರು. ಭಾರದ್ವಾಜ ಮುನಿಗಳು ಸಂಸ್ಕೃತದಲ್ಲಿ ಬರೆದಿರುವ ವೈಮಾನಿಕ ಶಾಸ್ತ್ರ 'ಯಂತ್ರ ಸ್ವಾರಸ್ಯ'ಕ್ಕೆ ಶಾಸ್ತ್ರಿಗಳು ಭಾಷ್ಯ ಬರೆದಿದ್ದರು.
   1903ರಲ್ಲಿ ಮಾರುತ್ಸಕ ಎಂಬ ವಿಮಾನವನ್ನು ಸುಬ್ಬರಾಯ ಶಾಸ್ತ್ರಿಗಳು ಮುಂಬೈನಲ್ಲಿ ಉಡಾಯಿಸಿದ್ದರು. ಬ್ರಿಟೀಷರ ಕುತಂತ್ರದಿಂದ ಈ ಸಂಗತಿ ಇತಿಹಾಸದಲ್ಲಿ ದಾಖಲಾಗಲಿಲ್ಲ. ಜಗದೀಶ ಚಂದ್ರ ಬೋಸರು ಬರೆದಿರುವ ಸುಬ್ಬರಾಯ ಶಾಸ್ತ್ರಿಗಳ ಜೀವನ ಚರಿತ್ರೆಯಲ್ಲಿ ಈ ಬಗ್ಗೆ ಉಲ್ಲೇಖವಿದೆ.
ಹೆಚ್ಚಿನ ವಿವರಗಳಿಗೆ :-

No comments:

Post a Comment