ANV
Tuesday, November 1, 2011
Saturday, October 1, 2011
Tuesday, August 16, 2011
ಭ್ರಷ್ಟಾಚಾರದ ವಿರುದ್ಧ ಸಾಮೂಹಿಕ ದನಿ
ಈ ದೇಶದಲ್ಲಿ ನಿಂತರೆ ಲಂಚ ಕೊಡಬೇಕು, ಕೂತರೆ ಲಂಚ ಕೊಡಬೇಕು. ಸಾಕಪ್ಪಾ ಸಾಕು.
ಇನ್ನಾದರೂ ಸಾಕು. ಏಳ್ರಪ್ಪಾ, ಎದ್ದೇಳ್ರಮ್ಮಾ. ಈ ಅನಿಷ್ಟದ ವಿರುದ್ಧ ಹೋರಾಡುವುದಕ್ಕೆ
ನಿಮ್ಮ ಹೆಗಲುಗಳನ್ನು ಸ್ವಲ್ಪ ಸಾಲ ಕೊಡ್ತೀರಾ?
ನಿಮ್ಮ ಬೆಂಬಲ ಯಾರಿಗೆ?
Wednesday, August 10, 2011
ಎಲ್ ಪಿಜಿ, ಪಡಿತರ ಚೀಟಿ ಅಕ್ರಮ ಸಕ್ರಮ ಚೆಕ್ ಮಾಡಿ
ಪಡಿತರ ಚೀಟಿದಾರರು ಹಾಗೂ ಅಡುಗೆ ಅನಿಲ(ಎಲ್ ಪಿಜಿ) ಗ್ರಾಹಕರು ತಮ್ಮ ಖಾತೆಗಳು ಕಾನೂನು
ಬದ್ಧವಾಗಿದೆಯೇ? ಅಕ್ರಮ ಸಂಪರ್ಕ ಏನಾದರೂ ಆಗಿದಿಯೇ? ಎಲ್ ಪಿಜಿ ಸಂಪರ್ಕ ರದ್ದು
ಪಡಿಸಲಾಗಿದೆಯೇ? ಎಂಬುದನ್ನು ಆನ್ ಲೈನ್ ಮೂಲಕ ತಿಳಿದುಕೊಳ್ಳಬಹುದು.
ಬೆಂಗಳೂರು
ನಗರದವೊಂದರಲ್ಲೇ 9.1 ಲಕ್ಷಕ್ಕೂ ಅಧಿಕ ಅನಧಿಕೃತ ಎಲ್ ಪಿ ಜಿ ಸಂಪರ್ಕ ಇರುವುದನ್ನು
ಸರ್ಕಾರ ಅಧಿಕೃತವಾಗಿ ಬಹಿರಂಗ ಪಡಿಸಿದ ಮೇಲೆ ಸಾರ್ವಜನಿಕರಲ್ಲಿ ತಮ್ಮ ಮನೆ ಎಲ್ ಪಿಜಿ
ಅಸಲಿಯೇ ನಕಲಿಯೇ ಎಂಬ ಪ್ರಶ್ನೆ ಕಾಡುತ್ತಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವೆಬ್ ಸೈಟ್ ಗೆ ಭೇಟಿ ನೀಡಿ ಸ್ಕ್ರೋಲ್ ಆಗುತ್ತಿರುವ ಕೊಂಡಿಯನ್ನು ಕ್ಲಿಕ್ ಮಾಡಿದರೆ ಎಲ್.ಪಿ.ಜಿ ಬಳಕೆದಾರರ ಜೋಡಣೆ ಸ್ಥಿತಿ ವೆಬ್ ಪುಟಕ್ಕೆ ನಿಮ್ಮನ್ನು ಕರೆದೊಯ್ಯುತ್ತದೆ.
ಆದರಲ್ಲಿ
ನಿಮ್ಮ ಎಲ್.ಪಿ.ಜಿ ಹಂಚಿಕೆದಾರರನ್ನು ಆಯ್ಕೆ ಮಾಡಿ(ಇಂಡೇನ್, ಹಿಂದೂಸ್ತಾನ್, ಭಾರತಿ)
ನಂತರ ಜಿಲ್ಲೆ, ಸ್ಥಳೀಯ ವಿತಕರರನ್ನು ಸೂಚಿಸಿ, ಬಳಕೆದಾರರ ಸಂಖ್ಯೆ ತಿಳಿಸಿದರೆ ನಿಮ್ಮ
ಎಲ್ ಪಿಜಿ ಜಾತಕ ತೆರೆದುಕೊಳ್ಳುತ್ತದೆ. ನಿಮ್ಮ ಸಂಪರ್ಕ ಕಾನೂನುಬದ್ಧವಾಗಿದೆ ಅಥವಾ ಇಲ್ಲ
ಎಂಬುದು ತಕ್ಷಣಕ್ಕೆ ತಿಳಿಯುತ್ತದೆ.
ವೆಬ್ ಸೈಟ್ ಜಾಮ್:
ಕಳೆದ ದಿನಗಳಲ್ಲಿ ಸುಮಾರು 41 ಲಕ್ಷಕ್ಕೂ ಅಧಿಕ ಗ್ರಾಹಕರು ಈ ವೆಬ್ ತಾಣಕ್ಕೆ ಭೇಟಿ
ನೀಡಿದ್ದಾರೆ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸುಲಭವಾಗಿ ಮಾಹಿತಿ
ಪಡೆಯಬಹುದಾಗಿದೆ. ಪಡಿತರ ಚೀಟಿ ಹಾಗೂ ಎಲ್ ಪಿಜಿ ಬಳಕೆದಾರರ ಮಾಹಿತಿಯಲ್ಲಿ
ಬದಲಾವಣೆಗಳಿದ್ದರೆ ಅದನ್ನು ಅಧಿಕಾರಿಗಳ ಗಮನಕ್ಕೆ ತರಬಹುದು. 24 ಗಂಟೆಗಳಲ್ಲಿ
ತಿದ್ದುಪಡಿ ಮಾಡಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಬಿಎ ಹರೀಶ್ ಗೌಡ ತಿಳಿಸಿದ್ದಾರೆ.
ಇಂಟರ್ ನೆಟ್ ಇಲ್ಲದವರು ಏನ್ ಮಾಡ್ಬೇಕು?: ಸಂಬಂಧಿಸಿದ ತಾಲೂಕು ಕಚೇರಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ನಿರೀಕ್ಷಕರನ್ನು ಭೇಟಿಯಾಗಿ ಮಾಹಿತಿ ಮತ್ತು ಪರಿಹಾರ ಪಡೆಯಬಹುದು.
http://web1.kar.nic.in/fcslpg4/verify_lpg_status.aspx Friday, July 8, 2011
ಪಂಚತಂತ್ರ ಆಗಿದೆ ಅತಂತ್ರ, ಫ್ರಾನ್ಸಿಸ್ ಆಸ್ತಿ, ಲೆಕ್ಕ ನಾಸ್ತಿ
ಗ್ರಾಮ ಪಂಚಾಯ್ತಿಯ ವ್ಯವಹಾರಗಳು ಹಾಗೂ ಭೂ ದಾಖಲೆಗಳ ನಿರ್ವಹಣೆ ಸುಸೂತ್ರವಾಗಿ ಆಗಲಿ
ಎಂದು ಕರ್ನಾಟಕ ಸರ್ಕಾರ ಪಂಚತಂತ್ರ ಎಂಬ ಹೊಸ ಸಾಫ್ಟ್ ವೇರ್ ಅನ್ನು ಪರಿಚಯಿಸಿದೆ.
ಭ್ರಷ್ಟಾಚಾರಕ್ಕೆ
ಕಡಿವಾಣ ಹಾಕುವುದು, ಗ್ರಾಮಮಟ್ಟದಲ್ಲಿ ಆಸ್ತಿ ವಿವರ, ಇತರೆ ಮಾಹಿತಿ ಒದಗಿಸುವ
ನಿಟ್ಟಿನಲ್ಲಿ ಪಂಚಾಯತ್ ರಾಜ್ ಇಲಾಖೆ ಹಾಗೂ ರಾಷ್ಟ್ರೀಯ ಮಾಹಿತಿ ಕೇಂದ್ರ(NIC) ಇವರು
ಜಂಟಿಯಾಗಿ ಅಭಿವೃದ್ದಿ ಪಡಿಸಿರುವ ಈ ಸಾಫ್ಟ್ವೇರ್
http://stg1.kar.nic.in/panchatantra ಎಂಬ URL ನಲ್ಲಿ ಲಭ್ಯವಿದೆ. ಆದರೆ, ಈ
ಪಂಚತಂತ್ರದಲ್ಲಿ ಎಲ್ಲವೂ ಅತಂತ್ರವಾಗಿದೆ. ಕನ್ನಡ ಪದಗಳ ವಾಕ್ಯ ಪದ ದೋಷ ಸಹಿಸಿಕೊಂಡರೂ,
ಮಾಹಿತಿಯಲ್ಲಿ ಭಾರಿ ಲೋಪ ಕಂಡು ಬಂದಿದೆ.
ಆನ್ ಲೈನ್ ಮುಖಾಂತರ ಕಂದಾಯ
ಪಾವತಿಸುವ ಸೌಲಭ್ಯವು ಕೂಡ ಈ ವೆಬ್ ಸೈಟ್ ನಲ್ಲಿ ದೊರೆಯಲಿದೆ. ಸದ್ಯ ಗ್ರಾ.ಪಂ.ಗಳಿಗೆ
ಚುನಾವಣೆ ನಡೆದು ನೂತನ ಸಮಿತಿ ಆಸ್ತಿತ್ವಕ್ಕೆ ಬಂದಿರುವುದು ಮಾತ್ರವಲ್ಲದೇ,
ಗ್ರಾ.ಪಂ.ಗಳಿಗೆ ನೂತನವಾಗಿ ಪಂಚಾಯಿತಿ ಅಭಿವೃದ್ಡಿ ಅಧಿಕಾರಿಗಳು
ಕಾರ್ಯಪ್ರವೃತ್ತರಾಗಿದ್ದಾರೆ. ಈ ಸಂದರ್ಭದಲ್ಲಿ ಪಂಚತಂತ್ರ ಆನ್ ಲೈನ್ ತಂತ್ರಾಂಶದಿಂದ
ಗ್ರಾ.ಪಂ.ಗಳ ಶೇ.100ಕ್ಕೆ 100ರಷ್ಟು ಪಾರದರ್ಶಕ ಆಡಳಿತವನ್ನು ತಳಮಟ್ಟದಲ್ಲಿ
ನೀಡುತ್ತದೆ ಎಂಬುದು ಸರ್ಕಾರದ ಉದ್ದೇಶವಾಗಿದೆ.
ಪಂಚತಂತ್ರ ಆನ್ ಲೈನ್ ತಂತ್ರಾಂಶದಿಂದ ಗ್ರಾ.ಪಂ.ಗಳ ಸಂಪೂರ್ಣ ಮಾಹಿತಿ ದೊರೆಯಲಿದೆ. ಇದಕ್ಕಾಗಿ ನೀವು http://stg2.kar.nic.in/gpportal/ ತಾಣವನ್ನು ಸಂಪರ್ಕಿಸಬಹುದು. ಸಮಸ್ಯೆಯತ್ತ ಗಮನ ಹರಿಸೋಣ:
* http://stg2.kar.nic.in/gpportal/ ಬ್ರೌಸ್ ಮಾಡಿ
* english ಅಥವಾ ಕನ್ನಡ ಅಯ್ಕೆ ಮಾಡಿಕೊಳ್ಳಿ
* ಕರ್ನಾಟಕ ನಕಾಶೆಯಲ್ಲಿರುವ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ, ತಾಲ್ಲೂಕು ವೀಕ್ಷಿಸಿ
* BANGALORE URBAN>>ಆನೇಕಲ್>>ವಣಕನಹಳ್ಳಿ(ಬಲಬದಿ ಸ್ಕ್ರೋಲ್)>>ಆಸ್ತಿ ತೆರಿಗೆಗಳು>>ಸಿಂಗಸಂದ್ರ(drop down menu) ಗೆ ಹೋಗಿ
* ಆಸ್ತಿ ಸಂಖ್ಯೆ CHR11 ರಿಂದ 84 ರವರೆಗೆ ಗಮಿನಿಸಿ
KT
ಫ್ರಾನ್ಸಿಸ್ ಬಿನ್ KV ಥಾಮಸ್ ಎಂಬ ಒಂದೇ ಹೆಸರಿನಲ್ಲಿ ಖಾತೆ ಇರುತ್ತದೆ. ಅಲ್ಲದೆ
ಕೆಲವು ಆಸ್ತಿ ಸಂಖ್ಯೆ51 ರಿಂದ 54ರವರೆಗೆ ಹಣ ಸಂದಾಯ ಕೂಡಾ ಆಗಿರುತ್ತದೆ. ಇಷ್ಟು ದೊಡ್ಡ
ಆಸ್ತಿ ಆ ಹೆಸರಿನಲ್ಲಿಲ್ಲ ಹಾಗೂ ಈ ಲೋಪ ಇನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ
ಬಂದಿಲ್ಲ. ಇದು ಕೇವಲ ಕಣ್ತಪ್ಪಿನ ಲೋಪವೋ ಅಥವಾ ತಂತ್ರಾಂಶ ದೋಷವೋ ಸ್ಪಷ್ಟವಾಗಿಲ್ಲ.
ಇತರೆ
ಹಳ್ಳಿಗಳ ದಾಖಲೆಯಲ್ಲಿ ಈ ರೀತಿ ಯಾವುದೇ ದೋಷಗಳಿಲ್ಲ. ಕನ್ನಡ ಪದಗಳ ತಪ್ಪು ದಾಖಲೆಯನ್ನು
ಕಷ್ಟಪಟ್ಟು ಸಹಿಸಿಕೊಂಡರೆ ಮಾಹಿತಿ ಪಡೆಯಲು ಈ ತಾಣ ಸೂಕ್ತವಾಗಿದೆ. ಆದರೆ. ಈ ಮೇಲ್ಕಂಡ
ವಿವರಗಳ ಬಗ್ಗೆ ಸಂಬಂಧಪಟ್ಟವರು ಸೂಕ್ತವಾಗಿ ಪ್ರತಿಕ್ರಿಯಿಸಿ, ಲೋಪದೋಷಗಳನ್ನು
ಸರಿಪಡಿಸಬೇಕು ಎಂದು ಕೇಳಿಕೊಳ್ಳುತ್ತೇವೆ.
* ಚಂದ್ರಶೇಖರ್, ಆನೇಕಲ್
Sunday, June 5, 2011
ಲಕೋಟೆ ಸಂಸ್ಕೃತಿ
ಸಾಮಾನ್ಯವಾಗಿ ನಾವು ಯಾವುದಾದರೂ ಸರಕಾರಿ ಕಛೇರಿಯನ್ನು ಪ್ರವೇಶಿಸುತ್ತಿದ್ದಂತೆಯೇ ಕೆಲವು ಘೋಷಣೆಗಳನ್ನು ಕಾಣಬಹುದು. ‘ಸರಕಾರದ ಕೆಲಸ ದೇವರ ಕೆಲಸ, ಇಲ್ಲಿ ಲಂಚಕ್ಕೆ ಅವಕಾಶವಿಲ್ಲ. ಲಂಚದ ಆಮಿಷ ಬಂದರೆ ದೂರು ನೀಡಿ, ಮಧ್ಯವರ್ತಿಗಳಿಗೆ ಇಲ್ಲಿ ಅವಕಾಶವಿಲ್ಲ.....’ ಇತ್ಯಾದಿ.... ಇತ್ಯಾದಿ....
ಇಂತಹ ಘೋಷಣೆಗಳು ಲಂಚ ಕೊಡಲೇಬೇಕು ಎಂಬುದನ್ನು ನೆನಪಿಸುತ್ತವೆ ಎಂಬುದು ಬೇರೆಯೇ ಮಾತು. ಈಗೀಗ ಲೋಕಾಯುಕ್ತ ದಾಳಿಯ ಭಯದಿಂದ ಕೆಲವು ಹೊಸ ವ್ಯವಸ್ಥೆಗಳನ್ನೂ ಮಾಡಲಾಗಿದೆ.
‘ಕಾಂಚಾಣಂ ಕಾರ್ಯಸಿದ್ಧಿ’ ಎಂಬಂತೆ ನಾನು ಇತ್ತೀಚೆಗೆ ನಡೆದ ಒಂದು ಘಟನೆ ಹೇಳುತ್ತೇನೆ. ನನ್ನ ತಂದೆಯವರು ಶಿಕ್ಷಕ ವೃತ್ತಿಯಿಂದ ನಿವೃತ್ತಿಯಾದ ಮೇಲೆ ಪಿಂಚಣಿ ಪಡೆಯಲು ಜಿಲ್ಲಾ ಖಜಾನೆಗೆ ಹೋದೆ. ಅಲ್ಲಿಯ ಗುಮಾಸ್ತರು ಹೇಳಿದ ರೀತಿಯಲ್ಲಿ ಎಲ್ಲಾ ಕಾಗದ ಪತ್ರಗಳನ್ನು ಹಾಜರುಪಡಿಸಿ ಇನ್ನೇನು ಎಲ್ಲಾ ಕೆಲಸಗಳು ಮುಗಿದು ಖಜಾನೆ ಇಲಾಖೆಯಿಂದ ಕಾಗದಪತ್ರ ಬ್ಯಾಂಕಿಗೆ ಹೋಗುವುದೊಂದೇ ಬಾಕಿ. ಅಂತಿಮವಾಗಿ ಜಿಲ್ಲಾ ಖಜಾನಾಧಿಕಾರಿಯ ಹಸ್ತಾಕ್ಷರ ಬೀಳಬೇಕು ಅಷ್ಟೇ. ಈ ಹಂತದಲ್ಲಿ ನಮ್ಮ ಫೈಲು ಮುಗ್ಗರಿಸಿತು. ಎರಡು ದಿನವಾದರೂ ಫೈಲು ‘ಸಾಹೇಬ’ನ ಟೇಬಲ್ ಮೇಲೆ ಮಲಗಿತ್ತು.
ನಾಲ್ಕೈದು ದಿನ ಈ ಕಛೇರಿಗೆ ತಿರುಗಿ ತಿರುಗಿ ಬೇಸತ್ತ ನಾವು ಗುಮಾಸ್ತನ ಟೇಬಲ್ ಗೆ ಎಡತಾಕಿದೆವು. ಆತನ ಕೈಯಿಂದ ಮೂರು ಲಕೋಟೆಗಳು ಹೊರಬಂದವು. ‘ಒಂದರಲ್ಲಿ ಎಂಟು ನೂರು ಇಡಿ, ಅದು ಲೆಕ್ಕಾಧೀಕ್ಷಕರದ್ದು; ಇನ್ನೊಂದು ಸಾವಿರ ಇಡಿ, ಅದನ್ನು ನನ್ನದು; ದೊಡ್ಡ ಲಕೋಟೆಯಲ್ಲಿ ಆರು ನೂರು ಇಡಿ, ಅದು ನಮ್ಮ ಸಾಹೇಬರದ್ದು’ ಎಂದು ಹೇಳಿದ. ಅರ್ಧಗಂಟೆ ಬಿಟ್ಟು ಬಂದರೆ ನಿಮ್ಮ ಕೆಲಸ ಆಗುತ್ತದೆ, ಪಿಂಚಣಿಯ ಕಾಗದ ಪತ್ರ ನಿಮ್ಮ ಕೈಸೇರುತ್ತದೆ ಎಂದ ಆ ಭೂಪ.
ಅಂತೆಯೇ ಇನ್ನೇನು ಮಾಡುವುದೆಂದು ಮೂರು ಲಕೋಟೆ ತುಂಬಿಸಿ ಗುಮಾಸ್ತನ ಕೈಗೆ ಕೊಟ್ಟ. ಐದೇ ನಿಮಿಷದಲ್ಲಿ ನಮ್ಮ ಕಾಗದ ಪತ್ರಗಳು ನಮ್ಮ ಕೈ ಸೇರಿದವು. ಆಗಲೇ ಇನ್ನೊಬ್ಬ ನಿವೃತ್ತ ಸರಕಾರಿ ನೌಕರ ಬಂದರು. ಅವರ ಮುಂದೆಯೂ ಮೂರು ಲಕೋಟೆಗಳು ಪ್ರತ್ಯಕ್ಷವಾದವು. ಇದು ಗೂಂಡಾ ಸಂಸ್ಕೃತಿ, ಬಾರ್ ಸಂಸ್ಕೃತಿ ಇತ್ಯಾದಿಯಾಗಿ ಇರುವ ಹಲವಾರು ಭಾರತೀಯ ಸಂಸ್ಕೃತಿಗಳಲ್ಲಿ ಒಂದು. ಇದರ ಹೆಸರು ಲಕೋಟೆ ಸಂಸ್ಕೃತಿ!
ಜಲ್ದಿ ಎರ್ಡ್ ಗಿರ್ಮಿಟ್ ಹಾಕ್ರಿ!
ನಿತ್ಯ ಜೀವನದಲ್ಲಿ ತಮ್ಮ ಆಹಾರ, ಆಚಾರ, ವಿಚಾರ, ಭಾಷೆ, ಉಡುಗೆ-ತೊಡುಗೆಗಳಲ್ಲಿ, ಶಬ್ದ ಪ್ರಯೋಗದಲ್ಲಿ ಎಷ್ಟೊಂದು ವ್ಯತ್ಯಾಸಗಳನ್ನು ಕಾಣಬಹುದು! ನಮ್ಮ ಪಕ್ಕದ ಜಿಲ್ಲೆಯಲ್ಲೇ ಏಕೆ ನಮ್ಮ ಪಕ್ಕದ ತಾಲ್ಲೂಕುಗಳಲ್ಲಿಯೇ ಭಿನ್ನತೆ ಇರುತ್ತದೆ. ಊರಿನಿಂದ ಊರಿಗೆ ಹೋದರೂ, ಭಾಷೆ, ಆಚಾರ ವಿಚಾರಗಳನ್ನು ಹೊಂದಿಸಿಕೊಳ್ಳಬೇಕಾಗುತ್ತದೆ.
ಧಾರವಾಡದಲ್ಲಿ ಒಂದು ತರಬೇತಿಗೆ ಹೋಗಿದ್ದೆ. ಅಲ್ಲಿಯ ಕೆಲವು ಶಬ್ದ ಪ್ರಯೋಗಗಳು ನಮ್ಮ ಆಡು ಬಳಕೆಯ ಮಾತಿಗೆ ವ್ಯತಿರಿಕ್ತವಾಗಿದ್ದುದರಿಂದ ನಾನು ಕೆಲ ಹೊತ್ತು ಸಂಕಟಕ್ಕೀಡಾಗಬೇಕಾಯಿತು. ಮಾತು ಅದೇ, ಆದರೆ ಅರ್ಥ ಬೇರೆ!
ಒಂದು ಹಳ್ಳಿ. ಅಲ್ಲಿ ಸಮೀಕ್ಷಾ ಕಾರ್ಯ. ಗ್ರಾಮಸ್ಥರೊಂದಿಗೆ ಮಾತುಕತೆಗೆ ತೊಡಗಿದಾಗ ಆಗ ತಾನೇ ಪೇಟೆಯಿಂದ ವ್ಯಕ್ತಿಯೊಬ್ಬರು ಬಂದರು. ಬಂದವರು ತಾನು ಗ್ರಾಮ ಪಂಚಾಯಿತಿ ಸದಸ್ಯರೆಂದು ಪರಿಚಯಿಸಿಕೊಂಡರು. ಪಂಚಾಯಿತಿ ಸದಸ್ಯರೆಂದ ಮೇಲೆ ನಮಗೆ ಹತ್ತಿರದವರೇ. ನಮ್ಮ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮೂಲಕ ಉಪಗ್ರಹ ಆಧರಿತ ತರಬೇತಿ ಪಡೆಯುತ್ತಿದ್ದಾರೆಂದ ಮೇಲೆ ಆ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ನಮ್ಮಂತವರಿಗೆ ಖಂಡಿತವಾಗಿಯೂ ಹತ್ತಿರದವರು. ನಾನು ಬೇರೆ ಜಿಲ್ಲೆಯವನೆಂಬ ಅಳುಕು ಇದ್ದರೂ ನಾವೆಲ್ಲಾ ಒಂದೇ ಎಂಬ ಭಾವನಾತ್ಮಕ ಸಂಬಂಧ.
ಈ ಮೇಲೆ ಹೇಳಿದ ಪಂಚಾಯಿತಿ ಸದಸ್ಯರ ಜತೆ ಮಾತನಾಡುತ್ತಾ ಹೊರಗೆ ಬಂದಾಗ ಅವರು ಪಕ್ಕದ ಅಂಗಡಿಯೊಂದಕ್ಕೆ ನಮ್ಮನ್ನು ಕರೆದೊಯ್ದರು. ಇಲ್ಲಿಯ ವಿಶೇಷ ಒಂದಿದೆ. ಅದನ್ನು ಕೊಡಿಸ್ತೇನೆ ಅಂದವರೇ, “ಜಲ್ದಿ ಎರ್ಡ್ ಗಿರ್ಮಿಟ್ ಹಾಕ್ರಿ” ಎಂದು ದೊಡ್ಡ ಧ್ವನಿಯಲ್ಲಿ ಹೇಳಿದರು.
ಈ ‘ಗಿರ್ ಮಿಟ್’ ಎಂಬ ಶಬ್ದ ನನ್ನ ಕಿವಿಗೆ ಬೀಳುತ್ತಲೇ ನನ್ನ ಮೈಯಲ್ಲಿ ಒಂದು ಕಂಪನ ಶುರುವಾಯಿತು. ನಮ್ಮ ಹಳ್ಳಿಯಲ್ಲಿ ಇದರ ಅರ್ಥ ‘ಎರಡು ಹೊಡಿ’ ಎಂದು! ಸ್ವಲ್ಪ ಸಾವರಿಸಿಕೊಂಡು ನೋಡಿದಾಗ ಈ ಚಹಾ ಅಂಗಡಿಯಲ್ಲಿ ಏನಾದರೂ ವಿಶೇಷವಿರಬೇಕೆಂದು ಅನಿಸಿತು. ಅಂಗಡಿಯವನು ಎರಡು ಬಟ್ಟಲಲ್ಲಿ ಮಸಾಲೆ ಮಂಡಕ್ಕಿ (ದಕ್ಷಿಣ ಕನ್ನಡದ ಕಡೆಯಲ್ಲಿ ಚರುಂಬುರಿ ಎಂದು ಹೇಳುತ್ತಾರೆ) ತಂದಿಟ್ಟ. ಪ್ಲೇಟಿನಲ್ಲಿ ಉದ್ದಕ್ಕೆ ಕತ್ತರಿಸಿದ ಎರಡು ಮೆಣಸಿನಕಾಯಿ ಬೇರೆ!
ಅದು ಒಂದು ರೀತಿಯ ಪಾಠವೇ ಆಯಿತು. ಈ ರೀತಿಯಲ್ಲಿ ಎಷ್ಟೋ ಪದಪ್ರಯೋಗಗಳು ಅಪಾರ್ಥಕ್ಕೆ ಕಾರಣವಾಗುತ್ತದೆ. ಜಗಳವಾಡುತ್ತೇವೆ. ಆದರೆ ನಿಜವಾಗಿಯೂ ಭಾಷೆಯ ಉದ್ದೇಶ ನನ್ನ ಮನಸ್ಸಿನಲ್ಲಿ ಇರುವುದನ್ನು ನಿಮಗೆ ತಿಳಿಸುವುದು ಮತ್ತು ನೀವು ಹೇಳಿದ್ದನ್ನು ನಾನು ಅರ್ಥಮಾಡಿಕೊಳ್ಳುವುದು ಅಷ್ಟೇ ಅಲ್ಲವೇ?
ಇಂತಹ ಘೋಷಣೆಗಳು ಲಂಚ ಕೊಡಲೇಬೇಕು ಎಂಬುದನ್ನು ನೆನಪಿಸುತ್ತವೆ ಎಂಬುದು ಬೇರೆಯೇ ಮಾತು. ಈಗೀಗ ಲೋಕಾಯುಕ್ತ ದಾಳಿಯ ಭಯದಿಂದ ಕೆಲವು ಹೊಸ ವ್ಯವಸ್ಥೆಗಳನ್ನೂ ಮಾಡಲಾಗಿದೆ.
‘ಕಾಂಚಾಣಂ ಕಾರ್ಯಸಿದ್ಧಿ’ ಎಂಬಂತೆ ನಾನು ಇತ್ತೀಚೆಗೆ ನಡೆದ ಒಂದು ಘಟನೆ ಹೇಳುತ್ತೇನೆ. ನನ್ನ ತಂದೆಯವರು ಶಿಕ್ಷಕ ವೃತ್ತಿಯಿಂದ ನಿವೃತ್ತಿಯಾದ ಮೇಲೆ ಪಿಂಚಣಿ ಪಡೆಯಲು ಜಿಲ್ಲಾ ಖಜಾನೆಗೆ ಹೋದೆ. ಅಲ್ಲಿಯ ಗುಮಾಸ್ತರು ಹೇಳಿದ ರೀತಿಯಲ್ಲಿ ಎಲ್ಲಾ ಕಾಗದ ಪತ್ರಗಳನ್ನು ಹಾಜರುಪಡಿಸಿ ಇನ್ನೇನು ಎಲ್ಲಾ ಕೆಲಸಗಳು ಮುಗಿದು ಖಜಾನೆ ಇಲಾಖೆಯಿಂದ ಕಾಗದಪತ್ರ ಬ್ಯಾಂಕಿಗೆ ಹೋಗುವುದೊಂದೇ ಬಾಕಿ. ಅಂತಿಮವಾಗಿ ಜಿಲ್ಲಾ ಖಜಾನಾಧಿಕಾರಿಯ ಹಸ್ತಾಕ್ಷರ ಬೀಳಬೇಕು ಅಷ್ಟೇ. ಈ ಹಂತದಲ್ಲಿ ನಮ್ಮ ಫೈಲು ಮುಗ್ಗರಿಸಿತು. ಎರಡು ದಿನವಾದರೂ ಫೈಲು ‘ಸಾಹೇಬ’ನ ಟೇಬಲ್ ಮೇಲೆ ಮಲಗಿತ್ತು.
ನಾಲ್ಕೈದು ದಿನ ಈ ಕಛೇರಿಗೆ ತಿರುಗಿ ತಿರುಗಿ ಬೇಸತ್ತ ನಾವು ಗುಮಾಸ್ತನ ಟೇಬಲ್ ಗೆ ಎಡತಾಕಿದೆವು. ಆತನ ಕೈಯಿಂದ ಮೂರು ಲಕೋಟೆಗಳು ಹೊರಬಂದವು. ‘ಒಂದರಲ್ಲಿ ಎಂಟು ನೂರು ಇಡಿ, ಅದು ಲೆಕ್ಕಾಧೀಕ್ಷಕರದ್ದು; ಇನ್ನೊಂದು ಸಾವಿರ ಇಡಿ, ಅದನ್ನು ನನ್ನದು; ದೊಡ್ಡ ಲಕೋಟೆಯಲ್ಲಿ ಆರು ನೂರು ಇಡಿ, ಅದು ನಮ್ಮ ಸಾಹೇಬರದ್ದು’ ಎಂದು ಹೇಳಿದ. ಅರ್ಧಗಂಟೆ ಬಿಟ್ಟು ಬಂದರೆ ನಿಮ್ಮ ಕೆಲಸ ಆಗುತ್ತದೆ, ಪಿಂಚಣಿಯ ಕಾಗದ ಪತ್ರ ನಿಮ್ಮ ಕೈಸೇರುತ್ತದೆ ಎಂದ ಆ ಭೂಪ.
ಅಂತೆಯೇ ಇನ್ನೇನು ಮಾಡುವುದೆಂದು ಮೂರು ಲಕೋಟೆ ತುಂಬಿಸಿ ಗುಮಾಸ್ತನ ಕೈಗೆ ಕೊಟ್ಟ. ಐದೇ ನಿಮಿಷದಲ್ಲಿ ನಮ್ಮ ಕಾಗದ ಪತ್ರಗಳು ನಮ್ಮ ಕೈ ಸೇರಿದವು. ಆಗಲೇ ಇನ್ನೊಬ್ಬ ನಿವೃತ್ತ ಸರಕಾರಿ ನೌಕರ ಬಂದರು. ಅವರ ಮುಂದೆಯೂ ಮೂರು ಲಕೋಟೆಗಳು ಪ್ರತ್ಯಕ್ಷವಾದವು. ಇದು ಗೂಂಡಾ ಸಂಸ್ಕೃತಿ, ಬಾರ್ ಸಂಸ್ಕೃತಿ ಇತ್ಯಾದಿಯಾಗಿ ಇರುವ ಹಲವಾರು ಭಾರತೀಯ ಸಂಸ್ಕೃತಿಗಳಲ್ಲಿ ಒಂದು. ಇದರ ಹೆಸರು ಲಕೋಟೆ ಸಂಸ್ಕೃತಿ!
ಜಲ್ದಿ ಎರ್ಡ್ ಗಿರ್ಮಿಟ್ ಹಾಕ್ರಿ!
ನಿತ್ಯ ಜೀವನದಲ್ಲಿ ತಮ್ಮ ಆಹಾರ, ಆಚಾರ, ವಿಚಾರ, ಭಾಷೆ, ಉಡುಗೆ-ತೊಡುಗೆಗಳಲ್ಲಿ, ಶಬ್ದ ಪ್ರಯೋಗದಲ್ಲಿ ಎಷ್ಟೊಂದು ವ್ಯತ್ಯಾಸಗಳನ್ನು ಕಾಣಬಹುದು! ನಮ್ಮ ಪಕ್ಕದ ಜಿಲ್ಲೆಯಲ್ಲೇ ಏಕೆ ನಮ್ಮ ಪಕ್ಕದ ತಾಲ್ಲೂಕುಗಳಲ್ಲಿಯೇ ಭಿನ್ನತೆ ಇರುತ್ತದೆ. ಊರಿನಿಂದ ಊರಿಗೆ ಹೋದರೂ, ಭಾಷೆ, ಆಚಾರ ವಿಚಾರಗಳನ್ನು ಹೊಂದಿಸಿಕೊಳ್ಳಬೇಕಾಗುತ್ತದೆ.
ಧಾರವಾಡದಲ್ಲಿ ಒಂದು ತರಬೇತಿಗೆ ಹೋಗಿದ್ದೆ. ಅಲ್ಲಿಯ ಕೆಲವು ಶಬ್ದ ಪ್ರಯೋಗಗಳು ನಮ್ಮ ಆಡು ಬಳಕೆಯ ಮಾತಿಗೆ ವ್ಯತಿರಿಕ್ತವಾಗಿದ್ದುದರಿಂದ ನಾನು ಕೆಲ ಹೊತ್ತು ಸಂಕಟಕ್ಕೀಡಾಗಬೇಕಾಯಿತು. ಮಾತು ಅದೇ, ಆದರೆ ಅರ್ಥ ಬೇರೆ!
ಒಂದು ಹಳ್ಳಿ. ಅಲ್ಲಿ ಸಮೀಕ್ಷಾ ಕಾರ್ಯ. ಗ್ರಾಮಸ್ಥರೊಂದಿಗೆ ಮಾತುಕತೆಗೆ ತೊಡಗಿದಾಗ ಆಗ ತಾನೇ ಪೇಟೆಯಿಂದ ವ್ಯಕ್ತಿಯೊಬ್ಬರು ಬಂದರು. ಬಂದವರು ತಾನು ಗ್ರಾಮ ಪಂಚಾಯಿತಿ ಸದಸ್ಯರೆಂದು ಪರಿಚಯಿಸಿಕೊಂಡರು. ಪಂಚಾಯಿತಿ ಸದಸ್ಯರೆಂದ ಮೇಲೆ ನಮಗೆ ಹತ್ತಿರದವರೇ. ನಮ್ಮ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮೂಲಕ ಉಪಗ್ರಹ ಆಧರಿತ ತರಬೇತಿ ಪಡೆಯುತ್ತಿದ್ದಾರೆಂದ ಮೇಲೆ ಆ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ನಮ್ಮಂತವರಿಗೆ ಖಂಡಿತವಾಗಿಯೂ ಹತ್ತಿರದವರು. ನಾನು ಬೇರೆ ಜಿಲ್ಲೆಯವನೆಂಬ ಅಳುಕು ಇದ್ದರೂ ನಾವೆಲ್ಲಾ ಒಂದೇ ಎಂಬ ಭಾವನಾತ್ಮಕ ಸಂಬಂಧ.
ಈ ಮೇಲೆ ಹೇಳಿದ ಪಂಚಾಯಿತಿ ಸದಸ್ಯರ ಜತೆ ಮಾತನಾಡುತ್ತಾ ಹೊರಗೆ ಬಂದಾಗ ಅವರು ಪಕ್ಕದ ಅಂಗಡಿಯೊಂದಕ್ಕೆ ನಮ್ಮನ್ನು ಕರೆದೊಯ್ದರು. ಇಲ್ಲಿಯ ವಿಶೇಷ ಒಂದಿದೆ. ಅದನ್ನು ಕೊಡಿಸ್ತೇನೆ ಅಂದವರೇ, “ಜಲ್ದಿ ಎರ್ಡ್ ಗಿರ್ಮಿಟ್ ಹಾಕ್ರಿ” ಎಂದು ದೊಡ್ಡ ಧ್ವನಿಯಲ್ಲಿ ಹೇಳಿದರು.
ಈ ‘ಗಿರ್ ಮಿಟ್’ ಎಂಬ ಶಬ್ದ ನನ್ನ ಕಿವಿಗೆ ಬೀಳುತ್ತಲೇ ನನ್ನ ಮೈಯಲ್ಲಿ ಒಂದು ಕಂಪನ ಶುರುವಾಯಿತು. ನಮ್ಮ ಹಳ್ಳಿಯಲ್ಲಿ ಇದರ ಅರ್ಥ ‘ಎರಡು ಹೊಡಿ’ ಎಂದು! ಸ್ವಲ್ಪ ಸಾವರಿಸಿಕೊಂಡು ನೋಡಿದಾಗ ಈ ಚಹಾ ಅಂಗಡಿಯಲ್ಲಿ ಏನಾದರೂ ವಿಶೇಷವಿರಬೇಕೆಂದು ಅನಿಸಿತು. ಅಂಗಡಿಯವನು ಎರಡು ಬಟ್ಟಲಲ್ಲಿ ಮಸಾಲೆ ಮಂಡಕ್ಕಿ (ದಕ್ಷಿಣ ಕನ್ನಡದ ಕಡೆಯಲ್ಲಿ ಚರುಂಬುರಿ ಎಂದು ಹೇಳುತ್ತಾರೆ) ತಂದಿಟ್ಟ. ಪ್ಲೇಟಿನಲ್ಲಿ ಉದ್ದಕ್ಕೆ ಕತ್ತರಿಸಿದ ಎರಡು ಮೆಣಸಿನಕಾಯಿ ಬೇರೆ!
ಅದು ಒಂದು ರೀತಿಯ ಪಾಠವೇ ಆಯಿತು. ಈ ರೀತಿಯಲ್ಲಿ ಎಷ್ಟೋ ಪದಪ್ರಯೋಗಗಳು ಅಪಾರ್ಥಕ್ಕೆ ಕಾರಣವಾಗುತ್ತದೆ. ಜಗಳವಾಡುತ್ತೇವೆ. ಆದರೆ ನಿಜವಾಗಿಯೂ ಭಾಷೆಯ ಉದ್ದೇಶ ನನ್ನ ಮನಸ್ಸಿನಲ್ಲಿ ಇರುವುದನ್ನು ನಿಮಗೆ ತಿಳಿಸುವುದು ಮತ್ತು ನೀವು ಹೇಳಿದ್ದನ್ನು ನಾನು ಅರ್ಥಮಾಡಿಕೊಳ್ಳುವುದು ಅಷ್ಟೇ ಅಲ್ಲವೇ?
Tuesday, May 17, 2011
Subscribe to:
Posts (Atom)


